ಬೈಂದೂರು: ಹಾಸನ, ಮೈಸೂರು ಮಾರ್ಗವಾಗಿ ಸಂಚರಿಸುತ್ತಿರುವ ಬೆಂಗಳೂರು-ಕಾರವಾರ-ಬೆಂಗಳೂರು ಎಕ್ಸ್ಪ್ರೆಸ್ ರೈಲನ್ನು ಈಗಾಗಲೇ ಚಾಲನೆಗೊಂಡ ಹಾಸನ-ಶ್ರವಣಬೆಳಗೊಳ-ಯಶವಂತಪುರ ಮಾರ್ಗವಾಗಿ ಸಂಚರಿಸುವಂತೆ ಮಾಡಬೇಕೆಂದು ಬೈಂದೂರಿನ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಹಾಗೂ ರಾಷ್ಟ್ರೀಯ ರೈಲ್ವೆ ಗ್ರಾಹಕರ ಸಮಾಲೋಚನಾ ಸಮಿತಿ ಸದಸ್ಯ ಕೆ. ವೆಂಕಟೇಶ ಕಿಣಿ ದಕ್ಷಿಣ ಪಶ್ಚಿಮ ರೈಲ್ವೇಯ ಹುಬ್ಬಳ್ಳಿ ವಲಯದ ಮಹಾ ಪ್ರಬಂಧಕರಲ್ಲಿ ಮನವಿ ಮಾಡಿದ್ದಾರೆ.