ಶಹಾಪುರ: ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಹೆಚ್ಚಿನ ಮಳೆಯಾಗಿದ್ದರಿಂದ ನದಿಗೆ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯದ ಬಸವಸಾಗರದಿಂದ ಶುಕ್ರವಾರ ನೀರು ಹೊರ ಬಿಡಲಾಗುತ್ತಿದೆ.
ತಾಲ್ಲೂಕಿನ ಕೃಷ್ಣಾ ಹಾಗೂ ಭೀಮಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆವಹಿಸಬೇಕು. ದೋರನಹಳ್ಳಿ ಹಾಗೂ ಹಯ್ಯಾಳ ಹೋಬಳಿ ಮಟ್ಟದ ಕಂದಾಯ ನಿರೀಕ್ಷಕರಿಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್ ಸೋಮಶೇಖರ ಹಾಗರಗುಂಡಗಿ ತಿಳಿಸಿದ್ದಾರೆ.