ಗುಂಡ್ಲುಪೇಟೆ: ಶಾಸಕಿ ಮೋಹನ್ಕುಮಾರಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.
ಮಹದೇವಪ್ರಸಾದ್ ಅವರ ಬಳಿಕ ಕ್ಷೇತ್ರದಿಂದ ಮತ್ತೊಬ್ಬರು ಸಚಿವರಾಗುತ್ತಿರುವುದು ಅವರ ಬೆಂಬಲಿಗರಲ್ಲಿ ಹರ್ಷ ಉಂಟುಮಾಡಿದ್ದು, ತಾಲ್ಲೂಕಿನ ವಿವಿಧೆಡೆ ಬೆಂಬಲಿಗರು ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.