ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೂಡುಬಿದಿರೆಯಲ್ಲಿ ಪ್ರಶಾಂತ್ ಪೂಜಾರಿ, ಶಿವಮೊಗ್ಗದಲ್ಲಿ ವಿಶ್ವನಾಥ್ ಶೆಟ್ಟಿ, ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ರಾಜು, ಕೊಡಗಿನಲ್ಲಿ ಕುಟ್ಟಪ್ಪ, ಬೆಂಗಳೂರಿನಲ್ಲಿ ರುದ್ರೇಶ್, ಮಂಗಳೂರಿನಲ್ಲಿ ಶರತ್ ಮಡಿವಾಳ ಹತ್ಯೆ ಪ್ರಕರಣಗಳಲ್ಲಿ ಈ ಸಂಘಟ ನೆಗಳವರ ಕೈವಾಡ ಇರುವ ಬಗ್ಗೆ ಸಾಕ್ಷ್ಯಗಳು ಸಿಕ್ಕಿವೆ. ಹೀಗಾಗಿ, ಸಂಘಟನೆಗಳನ್ನು ನಿಷೇಧಿಸ ಬೇಕು ಎಂದು ಮಂಗಳೂರು ಚಲೋ ಆಯೋಜಿಸಿದ್ದು ಹುಬ್ಬಳ್ಳಿಯಲ್ಲಿ ಸೆ. 5ರಂದು ಬೈಕ್ ಜಾಥಾಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.