ಹನುಮಸಾಗರ: ವೀರಶೈವ- ಲಿಂಗಾಯತ ಒಂದೇ ಆಗಿದ್ದು, ರಾಜ್ಯಮಟ್ಟದ ಸಮ್ಮೇಳನದಲ್ಲಿ ಕೈಗೊಳ್ಳುವ ಯಾವುದೇ ಒಮ್ಮತದ ನಿರ್ಣಯಗಳಿಗೆ ನಮ್ಮ ಬೆಂಬಲ ಮತ್ತು ಬದ್ಧತೆಯನ್ನು ತೋರಿಸಬೇಕಾಗಿದೆ ಎಂದು ವೀರಶೈವ ಲಿಂಗಾಯತ ಧರ್ಮ ಸಮಾಜದ ನಿರ್ದೇಶಕ ಮಹಾಂತಯ್ಯ ಕೋಮಾರಿ ಹೇಳಿದರು.
ಇಲ್ಲಿನ ಅನ್ನದಾನೇಶ್ವರ ಮಠದಲ್ಲಿ ಶನಿವಾರ ವೀರಶೈವ ಲಿಂಗಾಯತ ಧರ್ಮದ ಸಂಘಟನೆಗಾಗಿ ಗುರು ವಿರಕ್ತರ ಹಾಗೂ ಭಕ್ತರ ಸದ್ಭಾವನಾ ಸಮಾವೇಶದ ನಿಮಿತ್ತ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಸೆ. 4ರಂದು ಶಿವಯೋಗ ಮಂದಿರದಲ್ಲಿ ನಡೆಯುವ ಬೃಹತ್ ಸದ್ಭಕ್ತರ ಸದ್ಭಾವನಾ ಸಮ್ಮೇಳನದಲ್ಲಿ ನಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿದೆ. ಸಮ್ಮೇಳನಕ್ಕೆ ಬರುವ ಸದಸ್ಯರಿಗಾಗಿ ವಾಹನ ಸೌಕರ್ಯ ಮಾಡಲಾಗಿದೆ ಎಂದರು.