ಘಟನೆ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಎಎಸ್ಪಿ, ರಾತ್ರಿ 8ರ ಸುಮಾರಿಗೆ ಮೆರವಣಿಗೆ ಬರುತ್ತಿರುವಾಗ, ಮಾರ್ಗ ಮಧ್ಯೆ ಯಾರೊ ಕಾರು ನಿಲ್ಲಿಸಿದ್ದಾರೆ. ಈ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ಆರಂಭವಾಗಿದೆ. ಪೊಲೀಸರು ಗಲಾಟೆಯನ್ನು ನಿಯಂತ್ರಿಸುವ ಭರದಲ್ಲಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕೆಲವರು ಬಿದ್ದಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ದೂರು ದಾಖಲಾಗಿಲ್ಲ. ಸದ್ಯ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.