ತಹಶೀಲ್ದಾರ್ ಜೊತೆ ಕುದೂರು ರಾಜಸ್ವ ನಿರೀಕ್ಷಕ ಶಿವಕುಮಾರ್, ಗ್ರಾಮ ಸಹಾಯಕರಾದ ಬೈಲಪ್ಪ, ನಟೇಶ್, ರಂಗಪ್ಪ, ರಂಗನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ನಾಲ್ವರ ವಿರುದ್ಧ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ‘ಪ್ರಕರಣ ಕುರಿತು ಈಗಷ್ಟೇ ದೂರು ದಾಖಲಿಸಿಕೊಳ್ಳಲಾಗುತ್ತಿದ್ದು, ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.