ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜವಾಬ್ದಾರಿ ಹೆಚ್ಚಿದೆ: ಕೃಷ್ಣಮೂರ್ತಿ

Last Updated 4 ಸೆಪ್ಟೆಂಬರ್ 2017, 10:02 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಅಖಿಲ ಭಾರತ ಕಾಂಗ್ರೆಸ್ ಸಮಿತಿ ಒಪ್ಪಿಗೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿಯ ರಾಜ್ಯ ಸಂಚಾಲಕರನ್ನಾಗಿ ನೇಮಕ ಮಾಡಿರುವುದು ಇನ್ನಷ್ಟು ಜವಾಬ್ದಾರಿ ಹೆಚ್ಚಿದೆ’ ಎಂದು ಸಂಚಾಲಕ ಡಿ.ವಿ ಕೃಷ್ಣಮೂರ್ತಿ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಶನಿವಾರ ನೇಮಕ ಅದೇಶ ಪತ್ರದೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ಖೇತ್ ಮಜ್ದೂರ್ ಕಾಂಗ್ರೆಸ್ ಘಟಕದಲ್ಲಿ ಜಿಲ್ಲಾ ಅಧ್ಯಕ್ಷನಾಗಿ ಪಕ್ಷದ ಸಂಘಟನೆಗೆ ಒತ್ತು ನೀಡಿದ್ದೆ . ಕಳೆದ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಯುವ ಪಡೆಯ ಕಾರ್ಯಕರ್ತರೊಂದಿಗೆ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ’ ಎಂದರು.

‘ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 274 ಮತಗಟ್ಟೆ ಇದ್ದು ಪ್ರತಿಯೊಂದು ಮತಗಟ್ಟೆಯಲ್ಲಿ ಸಮಿತಿ ರಚಿಸಿ ಕನಿಷ್ಠ ಐದು ಪದಾಧಿಕಾರಿಗಳನ್ನಾಗಿ ನೇಮಕ ಮಾಡಬೇಕು, ಗ್ರಾಮ ಪಂಚಾಯಿತಿ ಮತ್ತು ಮತಗಟ್ಟೆ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ಗಮನ ಹರಿಸಿ ಮತ ಗಟ್ಟಿಗೊಳಿಸುವ ಪ್ರಯತ್ನ ನನ್ನ ಜವಾಬ್ದಾರಿಯಾಗಿದ್ದು ಪಕ್ಷದ ಹಿರಿಯ ಮುಖಂಡರ ಸಲಹೆ ಮೇಲೆ ಕಾರ್ಯಪ್ರವೃತ್ತರಾಗಬೇಕಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT