ಜಿಲ್ಲೆಯ ಹಲವು ಕೆರೆಗಳು ಈಗಾಗಲೇ ಕೋಡಿ ಬಿದ್ದಿದ್ದು, ಇನ್ನೂ ಹಲವು ಭರ್ತಿಯ ಹಂತಕ್ಕೆ ತಲುಪಿವೆ. ಅಗತ್ಯ ಪ್ರಮಾಣದಲ್ಲಿ ನೀರಿನ ಸಂಗ್ರಹವಾಗುತ್ತಿದ್ದು, ಕೃಷಿ ಕಾರ್ಯಕ್ಕೆ, ಜಾನುವಾರುಗಳ ಬಳಕೆಗೆ ಹೆಚ್ಚು ಅನುಕೂಲವಾಗಿದೆ. ಅಚ್ಚುಕಟ್ಟು ಪ್ರದೇಶಗಳ ರೈತರು ಭತ್ತ, ಜೋಳ ಮೊದಲಾದ ಬೆಳೆಗಳನ್ನು ಬೆಳೆಯಲಾರಂಭಿಸಿದ್ದಾರೆ.