ಔರಾದ್: ಮಳೆ ಕೊರತೆ ನಡುವೆಯೂ ತಾಲ್ಲೂಕಿನ ನಾಗೂರ (ಎಂ) ರೈತರು ಉತ್ತಮ ಇಳುವರಿ ಪಡೆದಿದ್ದಾರೆ. ತಾಲ್ಲೂಕಿನಲ್ಲಿ ಮಳೆ ಕೊರತೆಯಾಗಿ ಮುಂಗಾರು ಬೆಳೆ ಕೈಕೊಟ್ಟಿದೆ. ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಆದರೆ, ನಾಗೂರ (ಎಂ) ಗ್ರಾಮಸ್ಥರು ಮಾತ್ರ ಎಕರೆಗೆ 6ರಿಂದ 8 ಕ್ವಿಂಟಲ್ ಉದ್ದು–ಹೆಸರು ಇಳುವರಿ ಪಡೆದಿದ್ದಾರೆ. ತೆರೆದ ಬಾವಿಗಳಲ್ಲಿ ಸಾಕಷ್ಟು ನೀರಿದೆ. ಹೀಗಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿಲ್ಲ.