ಈಗ ಕೆಲವು ದಿನಗಳಿಂದ ಜಿಲ್ಲಾ ಕಾರಾಗೃಹದ ಮುಂಭಾಗದಲ್ಲಿ ಚರಂಡಿಯೊಂದನ್ನು ಈ ರಸ್ತೆಗೆ ಸಂಪರ್ಕಿಸಲಾಗಿದೆ. ಇದರಿಂದ ಕೊಳಚೆ ನೀರು ರಸ್ತೆಯ ಮೇಲೆಯೇ ನೇರವಾಗಿ ಹರಿಯುತ್ತಿದೆ. ದುರ್ವಾಸನೆ ಬೀರುವ ಕೊಳಚೆಯ ನಡುವೇ ಇಲ್ಲಿನ ಜನರು ನಿತ್ಯ ಸಂಚರಿಸುವಂತಾಗಿದೆ. ಚರಂಡಿಯ ನೀರನ್ನು ಮುಖ್ಯ ಚರಂಡಿಗೆ ಸಂಪರ್ಕಿಸಿ, ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಾರೆ.