ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆ ಕ್ರಮ: ಮುತಾಲಿಕ್‌ ಪೊಲೀಸ್‌ ವಶಕ್ಕೆ

Last Updated 5 ಸೆಪ್ಟೆಂಬರ್ 2017, 8:44 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಸೋಮವಾರ ಸಂಜೆ ನಗರದ ವಿಜಯಪುರ ಬಡಾವಣೆಯ ಶ್ರೀ ಸಾಯಿ ಕಂಫರ್ಟ್ಸ್ ಲಾಡ್ಜ್‌ನಲ್ಲಿ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳವಾರ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾದ ಗಣಪತಿ ಮೂರ್ತಿ ವಿಸರ್ಜನೆ ಇದೆ. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಲ್ಲಿನ ಪೊಲೀಸ್ ವರಿಷ್ಠಾಧಿಕಾರಿಯ ಶಿಫಾರಸ್ಸಿನಂತೆ ಸೆ.4ರಿಂದ ಸೆ.15ರವರೆಗೆ ಪ್ರಮೋದ್ ಮುತಾಲಿಕ್ ಅವರು ಜಿಲ್ಲೆ ಪ್ರವೇಶಿಸದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಎಂ.ಲೋಕೇಶ್ ಆದೇಶ ನೀಡಿದ್ದಾರೆ.

ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರಿನಲ್ಲೂ ಅವರಿಗೆ ತಂಗಲು ಅವಕಾಶ ಕೊಡದೆ ನೋಟಿಸ್ ನೀಡಿ, ವಶಕ್ಕೆ ಪಡೆದು ದಾವಣಗೆರೆಗೆ ಕರೆದೊಯ್ಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT