ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಷ್ಕರ್ಮಿಗಳ ಗುಂಡೇಟಿಗೆ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಬಲಿ

ರಾಜ ರಾಜೇಶ್ವರಿ ನಗರದಲ್ಲಿರುವ ಮನೆಯಲ್ಲಿ ದಾಳಿ
Last Updated 5 ಸೆಪ್ಟೆಂಬರ್ 2017, 20:04 IST
ಅಕ್ಷರ ಗಾತ್ರ
ADVERTISEMENT

ಬೆಂಗಳೂರು:  ಹಿರಿಯ ಪತ್ರಕರ್ತೆ ಹಾಗೂ ಸಾಹಿತಿ ಗೌರಿ ಲಂಕೇಶ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಮಂಗಳವಾರ ರಾತ್ರಿ 8 ಸುಮಾರಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ.

ನಗರದ ರಾಜರಾಜೇಶ್ವರಿ ನಗರದಲ್ಲಿರುವ  ಅವರ ಮನೆಯಲ್ಲಿ ಈ ಗುಂಡಿನ ದಾಳಿ ನಡೆದಿದೆ. 

ಗೌರಿ ಲಂಕೇಶ್ ಅವರು ಮನೆಯ ಬಾಗಿಲ ಬೀಗ ತೆಗೆಯುತ್ತಿದ್ದ ವೇಳೆ  ದುಷ್ಕರ್ಮಿಗಳು ಎದೆ ಹಾಗೂ ಹಣೆಯ ಭಾಗಕ್ಕೆ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.  ಆಗ ಗೌರಿ ಲಂಕೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಂಬಂಧಿಕರು, ಪೊಲೀಸರು ನೂರಾರು ಮಂದಿ ಜಮಾಯಿಸಿದ್ದಾರೆ. ಅಲ್ಲದೇ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.

</p><p>ಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT