ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿ ಶಹನವಾಜ್, ವಾರ್ಡ್ ಸದಸ್ಯ ಕಿರಣ್ ಸಾನಬಾಳ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಚರಂಡಿ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪುರಸಭೆ ಅಧ್ಯಕ್ಷ ಮೌನೇಶ ಮುರಾರಿ ತಿಳಿಸಿದ್ದಾರೆ. ಗಾಂಧಿನಗರ, ಸೋಮನಾಥ ನಗರ ಸೇರಿದಂತೆ ಕೆಲವೊಂದು ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿರುವ ಬಗ್ಗೆ ವರದಿ ಆಗಿದೆ.