ಶಹಾಪುರ: ತಾಲ್ಲೂಕಿನ ಭೀಮರಾಯನಗುಡಿ, ದೋರನಹಳ್ಳಿ, ಸಗರ ಗ್ರಾಮದ ವ್ಯಾಪ್ತಿಯ ಪ್ರದೇಶದಲ್ಲಿ ಮಂಗಳವಾರ ಜಿಟಿ ಜಿಟಿ ಮಳೆಯಾಯಿತು. ಆತಂಕ ಸ್ಥಿತಿಯಲ್ಲಿದ್ದ ರೈತರಿಗೆ ಮಳೆಯು ತುಸು ನೆಮ್ಮದಿ ತಂದಿತು. ಮಂಗಳವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ನಗರದ ತಗ್ಗು ಪ್ರದೇಶದಲ್ಲಿ ನೀರು ಸಂಗ್ರಹವಾಗಿದೆ.
‘ಸಕಾಲಕ್ಕೆ ಮಳೆಯಾಗಿರುವ ಕಾರಣ ಬಿತ್ತನೆ ಮಾಡಿದ ಹತ್ತಿ, ತೊಗರಿ ಬೆಳೆಗೆ ಹೆಚ್ಚು ಅನುಕೂಲವಾಗಲಿದೆ. ವಾಯುಭಾರ ಕುಸಿತ ಪರಿಣಾಮದಿಂದ ಮಳೆಯಾಗುವ ಲಕ್ಷಣಗಳಿವೆ. ಮಳೆಯಿಂದ ಬೆಳೆಗೆ ಹೆಚ್ಚು ಅನುಕೂಲ’ ಎಂದು ಸಹಾಯಕ ಕೃಷಿ ನಿರ್ದೇಶಕ ಡಾ.ದಾನಪ್ಪ ಕತ್ನಳ್ಳಿ ತಿಳಿಸಿದ್ದಾರೆ.