ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತೆ ಗೌರಿ ಹತ್ಯೆ ಖಂಡಿಸಿ ಪ್ರತಿಭಟನೆ

Last Updated 6 ಸೆಪ್ಟೆಂಬರ್ 2017, 6:34 IST
ಅಕ್ಷರ ಗಾತ್ರ

ಮಂಡ್ಯ: ಪತ್ರಕರ್ತೆ ಗೌರಿ ಲಂಕೇಶ್‌ ಅವರ ಹತ್ಯೆ ಖಂಡಿಸಿ ನಗರದ ಸಂಜಯ್‌ ವೃತ್ತದಲ್ಲಿ ಮಂಗಳವಾರ ರಾತ್ರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ರಾತ್ರಿ 10.30ರ ಸಮಯದಲ್ಲಿ ಸಂಜಯ್‌ ವೃತ್ತಕ್ಕೆ ವಿವಿಧ ಸಂಘಟನೆಗಳ ಕಾರ್ಯಕರ್ತರು, ಹಾಸ್ಟೆಲ್‌ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಜಯ್‌ ವೃತ್ತದಲ್ಲಿ ಸ್ವಯಂಪ್ರೇರಿತವಾಗಿ ಬಂದು ಸೇರಿದರು.

24 ಗಂಟೆಯೊಳಗಾಗಿ ಗೌರಿ ಲಂಕೇಶ್‌ ಹಂತಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಬಿಎಸ್‌ಪಿ ಮುಖಂಡ ಎಂ.ಕೃಷ್ಣಮೂರ್ತಿ‘ ಜನಪರ ಸೇವಾ ಕ್ರಿಯಾ ವೇದಿಕೆಯ ಎಂ.ಬಿ.ನಾಗಣ್ಣಗೌಡ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT