ನಂತರ ವಾಗ್ವಾದಕ್ಕಿಳಿದ ಕಾರ್ಯಕರ್ತರ ಮತ್ತು ಪೊಲೀಸರ ನಡುವೆ ಸುಮಾರು 20 ನಿಮಿಷ ಮಾತಿನ ಚಕಮಕಿ ನಡೆಯಿತು. ನಂತರ ಅವರನ್ನು ಬಂಧಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ರಾಜಣ್ಣ, ಉಪಾಧ್ಯಕ್ಷ ಎಚ್. ಎಂ.ರವಿಕುಮಾರ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸುನಿಲ್, ಬಿಜೆಪಿ ರಾಜ್ಯ ಪರಿಷದ್ ಸದಸ್ಯ ದೇ.ಸು ನಾಗರಾಜ್, ಮುಖಂಡ ಡಿ.ಆರ್.ನಾರಾಯಣಸ್ವಾಮಿ, ಕೆ.ನಾಗೇಶ್ ಸೇರಿದಂತೆ 22 ಮುಖಂಡರನ್ನು ಬಂಧಿಸಿ ಬೆಂಗಳೂರು ನಗರದ ಕಡೆ ಕರೆದೊಯ್ದರು.