ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡಲು ಬರುವ ಹೆಣ್ಣುಮಕ್ಕಳು ಬಡ ಕುಟುಂಬದಿಂದ ಬರುವವರಾಗಿದ್ದು, ಅವರಿಗೆ ಯಾವುದೇ ಉದ್ಯೋಗ ಖಾತ್ರಿ ಇರುವುದಿಲ್ಲ. ಅದ್ದರಿಂದ ಅವರ ಸುರಕ್ಷತೆಗೆ ಗಮನ ಹರಿಸಬೇಕು. ಮುಖ್ಯವಾಗಿ ಶೌಚಾಲಯ ಹಾಗೂ ಮೂಲ ಸೌಕರ್ಯ ಒದಗಿಸಬೇಕು ಎಂದು ಹೇಳಿದರು. ಬಾಕಿ ಉಳಿದಿರುವ ಪ್ರಕರಣಗಳನ್ನು ಬೇಗ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದರು.