'ಬೆಳೆ ಮತ್ತು ಆಹಾರದಲ್ಲಿ ವೈವಿಧ್ಯತೆ ಇರಬೇಕು. ಮಣ್ಣಿನ ಮತ್ತು ದೈಹಿಕ ಆರೋಗ್ಯದಲ್ಲಿ ಸಮತೋಲನ ಸಾಧಿಸಬೇಕಾದರೆ ಪರ್ಯಾಯ ಬೆಳೆ, ಆಹಾರಗಳತ್ತ ಗಮನಹರಿಸಬೇಕು. ನವಣೆ, ಹಾರಕ, ಬರಗು, ಸಾಮೆ, ಕೊರಲೆ ಮೊದಲಾದ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚುತ್ತಿದ್ದರೂ ಬೆಳೆಯುವವರ ಸಂಖ್ಯೆ ಕಡಿಮೆ ಇದೆ. ಭವಿಷ್ಯದಲ್ಲಿ ಉತ್ತಮ ಮಾರುಕಟ್ಟೆ ಸೃಷ್ಟಿಯಾಗಲಿದ್ದು, ಸಿರಿಧಾನ್ಯಗಳನ್ನು ಮೌಲ್ಯವರ್ಧನೆಗೊಳಿಸಿದರೆ ರೈತರು ಆರ್ಥಿಕವಾಗಿಯೂ ಸದೃಢರಾಗಬಹುದು' ಎಂದರು.