‘ಸಾರಿಗೆ ಸಂಸ್ಥೆ ಚಿಕ್ಕಬಳ್ಳಾಪುರ ವಿಭಾಗಕ್ಕೆ ವಿಚಾರಣಾ ನಿರ್ಣಯ ಅಧಿಕಾರಿಯನ್ನಾಗಿ ನೇಮಕ ಮಾಡಿರುವ ರಫೀವುಲ್ಲಾ ಖಾನ್ ಅವರು ಆಡಳಿತದಲ್ಲಿ ಕೇವಲ ಇಂಗ್ಲಿಷ್ ಬಳಕೆ ಮಾಡುತ್ತಿದ್ದಾರೆ. ಇದರಿಂದ ಕೆಳಹಂತದ ಕಾರ್ಮಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಅವರನ್ನು ಕೂಡಲೇ ಇಲ್ಲಿಂದ ವರ್ಗಾವಣೆ ಮಾಡಿ ಕನ್ನಡ ಬಲ್ಲ ಅಧಿಕಾರಿಯನ್ನು ಆ ಹುದ್ದೆಗೆ ನಿಯೋಜಿಸಬೇಕು’ ಎಂದು ಹೇಳಿದರು. ಮುಖಂಡರಾದ ಅಂಬರೀಷ್, ಇನಾಯತುಲ್ಲಾ, ರೇಣುಕಮ್ಮ, ದೇವರಾಜು, ನಂದಿ ಪುರುಷೋತ್ತಮ್, ಮಂಜುನಾಥ್, ಮುಬಾರಕ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.