ಶುಕ್ರವಾರ ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಭೂಗತ ಹೋರಾಟದಿಂದ ಹೊರ ಬಂದಿದ್ದರೂ ಮುಂದಿನ ದಿನಗಳಲ್ಲಿ ಸಾಮಾಜಿಕ ಅನ್ಯಾಯ, ಶೋಷಣೆ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಪ್ರಜಾತಾಂತ್ರಿಕ ಹೋರಾಟಗಳಲ್ಲಿ, ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತೇನೆ. ಈವರೆಗಿನ ಭೂಗತ ಹೋರಾಟದ ಅನುಭವ, ಸಾಧನೆಗಳು, ಮುಖ್ಯವಾಹಿನಿಗೆ ಮರಳಲು ಕಾರಣವಾದ ಅಂಶಗಳ ಬಗ್ಗೆ ಶೀಘ್ರವೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ’ ಎಂದರು.