ಸಿದ್ದರಾಮಯ್ಯ ಅವರು ತಮ್ಮದು ಪ್ರಾಮಾಣಿಕ ಸರ್ಕಾರ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರದು ತಲೆ ತಿರುಕ ಸರ್ಕಾರ. ಮುಖ್ಯಮಂತ್ರಿ ಸೇರಿದಂತೆ ಪ್ರಮುಖ ಸಚಿವರ ಭ್ರಷ್ಟಾಚಾರದ ದಾಖಲೆಗಳು ಲಭ್ಯವಾಗಿವೆ. ಬೆಂಗಳೂರಿನಲ್ಲಿ ಬಿಡುಗಡೆ ಮಾಡುತ್ತೇನೆ. ದಾಖಲೆ ಬಿಡುಗಡೆ ಮಾಡಿದ ನಂತರ ರಾಜ್ಯದ ಎಲ್ಲೆಡೆ ಹೋರಾಟ ಹಮ್ಮಿಕೊಂಡು ಸರ್ಕಾರದ ಬಣ್ಣ ಬಯಲು ಮಾಡಲಾಗುವುದು ಎಂದರು.