ಮಾಗಡಿ: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಾಗಡಿಯಿಂದ ಜಡೇದೇವರ ಮಠದ ಮಾರ್ಗವಾಗಿ ಕರೇನಹಳ್ಳಿ ಸಂಪರ್ಕ ರಸ್ತೆಯ ಸೇತುವೆ ಕುಸಿದಿದೆ.
ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳು ತಕ್ಷಣ ಸೇತುವೆ ದುರಸ್ತಿ ಪಡಿಸಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಾಲ್ಲೂಕು ರೈತ ಸಂಘದ ಕಾರ್ಯದರ್ಶಿ ಮಧು ಶ್ರೀನಿವಾಸ್ ತಿಳಿಸಿದ್ದಾರೆ.