ರಾಮನಗರ: ತಾಲ್ಲೂಕಿನ ಬಿಳಗುಂಬ ಗ್ರಾಮದ ರಾಜಪ್ಪ ಹಾಗೂ ಜ್ಯೋತಿ ದಂಪತಿಯ ೧೦ ತಿಂಗಳ ಗಂಡು ಮಗು ಡೆಂಗಿ ಜ್ವರಬಾಧೆಯಿಂದ ಭಾನುವಾರ ಮೃತಪಟ್ಟಿತು.
ಜ್ವರದ ಕಾರಣ ಮಗುವನ್ನು ಐದು ದಿನಗಳ ಹಿಂದೆ ಚಿಕಿತ್ಸೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗ್ರಾಮದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಅಧಿಕಾರಿಗಳು ರೋಗ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.