ರಾಮನಾಥಪುರದ ರಾಮೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪುಷ್ಕರ ಸ್ನಾನಾದಿ ಕೈಂಕರ್ಯಗಳ ಪೂರ್ವಸಿದ್ಧತೆಯನ್ನು ವೀಕ್ಷಿಸಿ ಮಾತನಾಡಿದ ಸಚಿವ ಎ. ಮಂಜು, ಲೋಕ ಕಲ್ಯಾಣಾರ್ಥವಾಗಿ ನಡೆಯವ ಈ ಕಾರ್ಯಕ್ರಮದ ನೇತೃತ್ವವನ್ನು ಅರೇಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಹಾಸನ ಆದಿಚುಚನಗಿರಿ ಮಠದ ಶಂಭುನಾಥ ಸ್ವಾಮೀಜಿ, ಚಿಲುಮೆ ಮಠದ ಜಯದೇವಸ್ವಾಮೀಜಿ, ಬಸವಾಪಟ್ಟಣ ತೋಂಟದಾರ್ಯ ಮಠದ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ, ಕೆಸವತ್ತೂರು ಮಠದ ಬಸವರಾಜೇಂದ್ರ ಸ್ವಾಮೀಜಿ, ಶಿರದನಹಳ್ಳಿ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ ಎಂದು ತಿಳಿಸಿದರು.