ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ನಂತರವೂ ದಂಪತಿಯ ಮನಃ ಪರಿವರ್ತಿಸಿ ಅವರು ಒಂದಾಗುವಂತೆ ಪ್ರಯತ್ನಿಸುವುದು ಅಗತ್ಯ. ಆದರೆ, ಅವರು ಒಂದಾಗುವ ಸಾಧ್ಯತೆಯೇ ಇಲ್ಲ ಎಂದ ಮೇಲೆ ಅದಕ್ಕಿಂತ ಒಳ್ಳೆಯ ಆಯ್ಕೆ ಅವರ ಮುಂದಿದೆ ಎಂದರ್ಥ. ಅವರ ಮುಂದಿನ ದಾರಿಯ ಆಯ್ಕೆಯನ್ನು ಅವರ ವಿವೇಚನೆಗೆ ಬಿಡಬೇಕು ಎಂದು ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟರು.