ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಆರ್‌. ದತ್ತಾತ್ರಿಗೆ ‘ನರಹಳ್ಳಿ ಪ್ರಶಸ್ತಿ’

Last Updated 23 ಸೆಪ್ಟೆಂಬರ್ 2017, 13:44 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ವಿಮರ್ಶಕ ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಡಾ. ನರಹಳ್ಳಿ ಪ್ರತಿಷ್ಠಾನ’ ಕನ್ನಡ ಬರಹಗಾರರಿಗೆ ಪ್ರತಿ ವರ್ಷವೂ ಪ್ರಶಸ್ತಿ ನೀಡುತ್ತಿದ್ದು, 2017ರ ಸಾಲಿನ ‘ನರಹಳ್ಳಿ ಪ್ರಶಸ್ತಿ’ಗೆ ಲೇಖಕ ಎಂ.ಆರ್‌. ದತ್ತಾತ್ರಿ ಆಯ್ಕೆಯಾಗಿದ್ದಾರೆ.

₹10 ಸಾವಿರ ನಗದು ಹಾಗೂ ಫಲಕವನ್ನು ‘ನರಹಳ್ಳಿ ಪ್ರಶಸ್ತಿ’ಒಳಗೊಂಡಿದೆ. ವೃತ್ತಿಯಿಂದ ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ದತ್ತಾತ್ರಿ ಅವರು ಅಂಕಣ ಬರಹ, ಕವನ ಸಂಕಲನ, ಲಲಿತ ಪ್ರಬಂಧಗಳು ಹಾಗೂ ಕಾದಂಬರಿ ‘ದ್ವೀಪವ ಬಯಸಿ’ ಮೂಲಕ ಎಲ್ಲರಿಗೂ ಪರಿಚಯ.

ಸೆ. 24ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಮರ್ಶಕ ಸಿ.ಎನ್‌. ರಾಮಚಂದ್ರನ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಚ್. ಎಸ್ ವೆಂಕಟೇಶಮೂರ್ತಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT