ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಪ್ಪನ್‌ ಸಹಚರ ಬಂಧನ

Last Updated 14 ಸೆಪ್ಟೆಂಬರ್ 2017, 8:43 IST
ಅಕ್ಷರ ಗಾತ್ರ

ಹನೂರು: ನ್ಯಾಯಾಲಯಕ್ಕೆ ಹಾಜರಾ ಗದೆ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವೀರಪ್ಪನ್‌ ಸಹಚರನನ್ನು ರಾಮಾಪುರ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಜಿಲ್ಲೆಯ ಗಡಿಭಾಗದ ಗೋಪಿನಾಥಂ ಬಳಿಯ ಆತೂರು ಗ್ರಾಮದ ಮುರುಗೇಶ್‌ ಬಂಧಿತ ವ್ಯಕ್ತಿ.

ಘಟನೆ ಹಿನ್ನೆಲೆ: ಪಟ್ಟಣದ ಗಣಿ ಉದ್ಯಮಿ ಸಂಪಂಗಿರಾಮಯ್ಯ ಅವರ ಪುತ್ರ ರಾಮಮೂರ್ತಿ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ 1991ರಲ್ಲಿ ನ.30ರಂದು ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುರುಗೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಮೂರೂವರೆ ವರ್ಷ ಸೆರೆವಾಸ ಅನುಭವಿಸಿದ್ದ ಆತ ಜಾಮೀನಿನ ಮೇಲೆ ಹೊರಗೆ ಬಂದಿದ್ದನು. ಅಂದಿನಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು. ಮಂಗಳವಾರ ಸ್ವಗ್ರಾಮದಲ್ಲಿದ್ದ ಮುರುಗೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT