ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಬಾಕಿ ಇದ್ದು, ಅದು ಪೂರ್ಣಗೊಂಡ ಕೂಡಲೇ ಎಲ್ಲಾ ಸರ್ವಿಸ್ ರಸ್ತೆಗಳು ನಿರ್ಮಾಣಗೊಳ್ಳಲಿವೆ. ಹಳೆಯಂಗಡಿಯಿಂದ ಮೂಲ್ಕಿಯವರೆಗೆ ಅಗತ್ಯವಿರುವ ಎಲ್ಲ ಕಾಮಗಾರಿಗಳನ್ನು ಶೀಘ್ರವೇ ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಮೂಲ್ಕಿ -ಪೊಳಲಿ ಚತುಷ್ಪಥ ಹೆದ್ದಾರಿ ನಿರ್ಮಾಣ ಯೋಜನೆ ಚಾಲನೆಯಲ್ಲಿದ್ದು, ಮೂಲ್ಕಿ -ಬಿ.ಸಿರೋಡ್-ಪೊಳಲಿ-ಬಜ್ಪೆ ರಸ್ತೆ ಹಾಗೂ ಮೇಲ್ಕಾರ್ನಿಂದ ಕೊಣಾಜೆವರೆಗಿನ ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸುತ್ತಿದೆ. ಈಗಾಗಲೇ ಯೋಜನೆ ಡಿಪಿಆರ್ ಹಂತದಲ್ಲಿದೆ. ಮುಂದಿನ ವರ್ಷ ಕಾಮಗಾರಿ ನಡೆಯುವ ನಿರೀಕ್ಷೆ ಇದೆ ಎಂದರು. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೊಳ್ಳೂರು, ಬಿಜೆಪಿ ಮುಖಂಡರಾದ ಉಮಾನಾಥ ಕೋಟ್ಯಾನ್, ರಂಗನಾಥ ಶೆಟ್ಟಿ ಇದ್ದರು.