ನಿರ್ವಹಣೆ ಇಲ್ಲದ ಉದ್ಯಾನ: ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ ಈ ಕೆರೆಯು ಸದ್ಯ ಸೂಕ್ತ ನಿರ್ವಹಣೆ ಇಲ್ಲದೆ ಸೊರಗುತ್ತಿದೆ. ಈ ಹಿಂದೆ ಪ್ರಾಧಿಕಾರವು ಇಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಸುಂದರವಾದ ಉದ್ಯಾನ, ನಡಿಗೆಯ ಪಥ, ರಕ್ಷಣಾ ಬೇಲಿ ಮೊದಲಾದ ಸೌಕರ್ಯಗಳನ್ನು ಕಲ್ಪಿಸಿತ್ತು. ಆದರೆ ಅದನ್ನು ಸೂಕ್ತವಾಗಿ ನಿರ್ವಹಿಸದ ಕಾರಣ ಪಾಳು ಬಿದ್ದಿದೆ.