ಮ್ಯಾನ್ಮಾರ್ನಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದು ಅಲ್ಲಿನ ರೋಹಿಂಗ್ಯಾ ಮುಸ್ಲಿಂ ಸಮುದಾಯದ ಲಕ್ಷಾಂತರ ಜನರು ಜೀವಭಯದಿಂದ ದಿಕ್ಕುದೆಸೆಯಿಲ್ಲದೆ ಓಡಿ ಹೋಗುತ್ತಿದ್ದಾರೆ. ಆದರೆ ಶಾಂತಿಗಾಗಿ ನೊಬೆಲ್ ಪುರಸ್ಕಾರ ಪಡೆದಿರುವ, ಮ್ಯಾನ್ಮಾರ್ನ ಆಡಳಿತ ಚುಕ್ಕಾಣಿ ಹಿಡಿದಿರುವ ಆಂಗ್ ಸಾನ್ ಸೂಕಿ ಮಾತ್ರ ಈ ಕುರಿತು ಏನೇನೂ ಕ್ರಮ ಕೈಗೊಳ್ಳದಿರುವುದು ಖಂಡನೀಯ.