ಬೆಳಗಾವಿ: ಇಲ್ಲಿನ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯು ತನ್ನ ಆಯ್ದ ಗ್ರಾಹಕರಿಗೆ ಕ್ರಿಕೆಟಿಗರೊಂದಿಗೆ ಫೋಟೋ ತೆಗೆದುಕೊಳ್ಳುವ ಅವಕಾಶವನ್ನು ಶುಕ್ರವಾರ ಒದಗಿಸಿತು.
ಕೃಷ್ಣದೇವರಾಯ ವೃತ್ತದಲ್ಲಿರುವ ಸಾಯಿ ಸಂಗಮ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಹಕರು ಮಾಜಿ ಕ್ರಿಕೆಟಿಗರಾದ ವೆಂಕಟೇಶ್ ಪ್ರಸಾದ್ ಹಾಗೂ ಶ್ರೀನಿವಾಸ ಮೂರ್ತಿ ಜತೆ ಫೋಟೋ ತೆಗೆಸಿಕೊಂಡು, ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.