‘ಹಾನಿ ಕುರಿತು ಜನಪ್ರತಿನಿಧಿಗಳು, ತಹಶೀಲ್ದಾರ್ ಸೇರಿದಂತೆ ಸಂಬಂಧಿಸಿದ ಎಲ್ಲ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಸರ್ವೆ ಮಾಡಿ ಪರಿಹಾರ ನೀಡುವಂತೆ ಕೋರಲಾಗಿದೆ. ಆದರೆ, ಅಧಿಕಾರಿಗಳು ನಷ್ಟ ಉಂಟಾದಲ್ಲಿ ಸರ್ವೆ ಮಾಡಿ ಪರಿಹಾರ ನೀಡುವುದನ್ನು ಬಿಟ್ಟು ಬೇರೆ ಸ್ಥಳದಲ್ಲಿ ಸರ್ವೆ ಮಾಡಿ ಬೆಳೆ ಹಾಳಾಗದ ರೈತರಿಗೆ ಪರಿಹಾರ ನೀಡಿದ್ದಾರೆ’ ಎಂದು ಭಾರತೀಯ ದಲಿತ ಪ್ಯಾಂಥರ್ಸ್ ತಾಲ್ಲೂಕು ಘಟಕದ ಅಧ್ಯಕ್ಷ ಕಾಶಿನಾಥ ಶೆಳ್ಳಗಿ ಆರೋಪಿಸಿದರು.