ಕಾಲೇಜು ಆವರಣದಲ್ಲಿ ಎಸ್.ಎನ್.ಟ್ರಸ್ಟ್ನಿಂದ ಎಸ್.ಎನ್.ಕ್ಯಾಂಟೀನ್ ತೆರೆದು ವಿದ್ಯಾರ್ಥಿಗಳಿಗೆ ಅಗ್ಗದ ದರದಲ್ಲಿ ತಿಂಡಿ, ಊಟ, ಕಾಫಿ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ ಸಿದ್ದತೆ ನಡೆದಿತ್ತು. ಇದಕ್ಕೆ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕ್ಯಾಂಟೀನ್ ತೆರೆಯಲು ಮುಂದಾಗಿದ್ದಾರೆ.