ವರದಿಯಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತವು ಶೀಘ್ರವೇ ಸ್ಪಂದಿಸಿ ಗ್ರಾಮಕ್ಕೆ ಬರುವ ರಸ್ತೆ ಅಭಿವೃದ್ಧಿ ಪಡಿಸಲು ಮುಂದಾಗಿದೆ. ಎರಡು ದಿನದಂದ ರಸ್ತೆಗೆ ಮಣ್ಣುಹೊಡೆಸಿ ರಸ್ತೆಯನ್ನು ಎತ್ತರಿಸುವ ಮೂಲಕ ರಸ್ತೆಯಲ್ಲಿ ನೀರು ನಿಲ್ಲದಂತೆ ಅಭಿವೃದ್ಧಿ ಕಾಮಗಾರಿ ಮಾಡುತ್ತಿದೆ. ‘ಪ್ರಜಾವಾಣಿ’ ವರದಿಯಿಂದ ರಸ್ತೆ ಅಭಿವೃದ್ಧಿ ಆಗುತ್ತಿರುವುದಕ್ಕೆ ಗ್ರಾಮದ ಜನತೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.