ಕಲಬುರ್ಗಿ ಜಿಲ್ಲಿಯಲ್ಲಿ ಏಮ್ಸ್ ಸ್ಥಾಪನೆಗಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಪ್ರಸ್ತಾವನೆ ಸಲ್ಲಿಸಿರುವುದು ಗಮನಕ್ಕೆ ಬಂದಿದೆ. ಆದರೆ, ಈ ಜಿಲ್ಲೆಗೆ ಉಸ್ತುವಾರಿಯಾಗಿದ್ದ ವೇಳೆ ರಾಯಚೂರಿಗೆ ಏಮ್ಸ್ ನೀಡುವ ಭರವಸೆ ನೀಡಿದ್ದರ ಬಗ್ಗೆ ಪರಿಶೀಲಿಸಲಾಗುವುದು. ಈ ಬಗ್ಗೆ ಸರ್ಕಾರದ ಗಮನ ಸೆಳೆಯುತ್ತೇನೆ ಎಂದು ಹೇಳಿದರು.