ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನಲ್ಲಿ ಮುಳುಗಿ ಯುವಕ ಸಾವು

Last Updated 18 ಸೆಪ್ಟೆಂಬರ್ 2017, 8:24 IST
ಅಕ್ಷರ ಗಾತ್ರ

ಹನೂರು: ಜನ್ಮದಿನ ಆಚರಣೆಯ ಸಂಭ್ರಮದಲ್ಲಿದ್ದ ಬೆಂಗಳೂರಿನ ಫ್ರೇಜರ್‌ಟೌನ್‌ನ ಯುವಕ ಭಾನುವಾರ ಮಧ್ಯಾಹ್ನ ಸ್ನೇಹಿತರೊಡನೆ ಈಜಲು ಹೋಗಿ ಮೃತಪಟ್ಟಿದ್ದಾರೆ. ಮೃತದೇಹಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಕಾಲ್‌ಸೆಂಟರ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಂ (24) ಮೃತ ದುರ್ದೈವಿ. ಚಾಮರಾಜನಗರ ಜಿಲ್ಲೆಯ ಚಿಕ್ಕಲ್ಲೂರು ಗ್ರಾಮದ ದೇವಸ್ಥಾನದ ಹೊಸಮಠದ ಬಳಿಯ ಚೆಕ್‌ಡ್ಯಾಂನಲ್ಲಿ ಈ ದುರ್ಘಟನೆ ನಡೆದಿದೆ.

ಸಮೀಪದ ನರೀಪುರದಲ್ಲಿ ಇರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಶನಿವಾರ 6 ಮಂದಿ ಸ್ನೇಹಿತರೊಂದಿಗೆ ವಾಸ್ತವ್ಯ ಹೂಡಿದ್ದ ಪ್ರೀತಂ, ಮಧ್ಯಾಹ್ನ 3.30ರ ಸುಮಾರಿಗೆ ಸ್ನೇಹಿತರ ಜತೆ ಚೆಕ್‌ಡ್ಯಾಂಗೆ ಈಜಲು ಇಳಿದಿದ್ದರು. ಆದರೆ, ಸರಿಯಾಗಿ ಈಜು ಬಾರದ ಅವರು ಮುಳುಗಿ ಮೃತಪಟ್ಟಿದ್ದಾರೆ.

ಹನೂರು ಪೊಲೀಸ್‌ ಠಾಣೆಯ ಸಿಬ್ಬಂದಿ ನುರಿತ ಈಜುಗಾರರ ಸಹಾಯದಿಂದ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸುಮಾರು 10 ಅಡಿ ಆಳ ಇರುವ ಡ್ಯಾಂನ ತಳ ಭಾಗದಲ್ಲಿ ದೇಹ ಸಿಲುಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT