ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿರುವ ಹಲವು ಸಚಿವರು ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ವೀರಶೈವ-ಲಿಂಗಾಯತ ವಿಚಾರದಲ್ಲಿ ತಮ್ಮ ಪ್ರಕಾಂಡ ಪಾಂಡಿತ್ಯವನ್ನು ತೋರಿಸುತ್ತಿದ್ದಾರೆ. ಇವರಲ್ಲಿ ಎಂ.ಬಿ. ಪಾಟೀಲ, ವಿನಯ ಕುಲಕರ್ಣಿ, ಈಶ್ವರ ಖಂಡ್ರೆ ಹಾಗೂ ಬಸವರಾಜ ರಾಯರಡ್ಡಿ ಪ್ರಮುಖರು.