ಹುಬ್ಬಳ್ಳಿ ಆವೃತ್ತಿಯ ಪಂದ್ಯಗಳು ಆರಂಭವಾದ ದಿನಗಳಂದು ಕ್ರೀಡಾಂಗಣಕ್ಕೆ ಹೆಚ್ಚು ಜನ ಬಂದಿರಲಿಲ್ಲ. ನಂತರ ಒಂದೆರೆಡು ದಿನ ಉತ್ತಮ ಸಂಖ್ಯೆಯಲ್ಲಿ ಜನ ಸೇರಿದ್ದರು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಧಾರವಾಡ ವಲಯವು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡು ಪಂದ್ಯ ನೋಡಲು ಬರುವವರಿಗೆ ಬಸ್ ವ್ಯವಸ್ಥೆ ಮಾಡಿದೆ. ಪ್ರತಿದಿನ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ನೀಡಿದೆ.