ಗೌರಿ ಲಂಕೇಶ್, ಎಂ.ಎಂ. ಕಲಬುರ್ಗಿ ಅವರ ಹಂತಕರ ಪತ್ತೆ ಶೀಘ್ರ ಆಗಬೇಕು ಎಂದು ಒತ್ತಾಯಿಸಿದರು. ‘ವೀರಶೈವ ಮತ್ತು ಲಿಂಗಾಯತ ಯಾವತ್ತಿಗೂ ಒಂದಾಗಲು ಸಾಧ್ಯವಿಲ್ಲ. ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಕುರಿತು ಹೋರಾಟ ಮುಂದುವರಿಯಲಿದೆ. ಈ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದರು.