ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಐದು ಪ್ರಕರಣಗಳು ಸಿಬಿಐಗೆ ಹೋಗಿವೆ. ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ; ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ಇದು ಗೋಡೆ ಬರಹದಂತೆ ಬಿಜೆಪಿಯವರಿಗೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದಕ್ಕಾಗಿ ಬಿಜೆಪಿಯವರು ಏನೆಲ್ಲಾ ಕಸರತ್ತು ಆರಂಭಿಸಿದ್ದಾರೆ ಎಂದರು.