ಬೇಲೂರು: ‘ಎತ್ತಿನಹೊಳೆ ಯೋಜನೆ ತಾಲ್ಲೂಕಿನ ಮೂಲಕ ಹಾದು ಹೋಗುತ್ತಿದ್ದರೂ, ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಶಾಸಕ ವೈ.ಎನ್.ರುದ್ರೇಶ್ಗೌಡ ಕ್ರಮಕೈಗೊಳ್ಳದೆ, ಜಾಣ ಮೌನ ವಹಿಸಿದ್ದಾರೆ, ಇತ್ತ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಶಿವರಾಂ ಕೆರೆಗಳಿಗೆ ನೀರು ಹರಿಸಲಾಗಿದೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ’ ಎಂದು ಜೆಡಿಎಸ್ ಮುಖಂಡರಾದ ಹಗರೆ ದಿಲೀಪ್ ಮತ್ತು ಈಶ್ವರ್ ಪ್ರಸಾದ್ ಆರೋಪಿಸಿದರು.