ಕೊಡಗು ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದ ಅವರು, ಮಂಗಳವಾರ ಮಧ್ಯಾಹ್ನದ ವೇಳೆಗೆ ಮಡಿಕೇರಿ ನಗರಕ್ಕೆ ಬಂದಿದ್ದರು. ತಮ್ಮ ಕೆಎ 04 ಎನ್ಟಿ 3666 ನೋಂದಣಿ ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಏಕಮುಖ ಸಂಚಾರ ರಸ್ತೆಯಲ್ಲಿ ತೆರಳುತ್ತಿದ್ದರು. ಆಗ ಅಲ್ಲಿದ್ದ ಸ್ಥಳೀಯರು, ಆಟೊ ಚಾಲಕರು ಯತಿರಾಜ್ ಅವರನ್ನು ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದಿದೆ.
ಅಸಮಾಧಾನಗೊಂಡ ಸ್ಥಳೀಯರು ವಾಹನ ತಡೆದು, ಪೊಲೀಸರಿಗೆ ಮಾಹಿತಿ ನೀಡಿದರು.