ಈ ಕುರಿತು ‘ಪ್ರಜಾವಾಣಿ’ 2016ರ ಡಿಸೆಂಬರ್ 8ರಂದು ವರದಿ ಪ್ರಕಟಿಸಿತ್ತು. ತಕ್ಷಣ ಅರಣ್ಯಾಧಿಕಾರಿಗಳು ಹೆಸ್ಕಾಂ ಅಧಿಕಾರಿಗಳ ಜತೆ ಸಭೆ ನಡೆಸಿ ವಿದ್ಯುತ್ ಸಂಪರ್ಕ ನೀಡಲು ಪ್ರಸ್ತಾವ ಸಲ್ಲಿಸಿ ಅನುಮತಿ ಪಡೆಯಲು ಸೂಚಿಸಿದ್ದರು. ತಳೆವಡಿ, ಕೃಷ್ಣಾಪುರ, ಹೋಲ್ದಾ, ಮೆಂಡಿಲ್ ಹಾಗೂ ದೇಗಾಂವ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 15 ಹೆಕ್ಟೇರ್ ಅರಣ್ಯ ಭೂಮಿ ಪರಿವರ್ತನೆಗೆ ಅನುಮತಿ ನೀಡುವಂತೆ ಹೆಸ್ಕಾಂ 2017ರ ಜನವರಿಯಲ್ಲಿ ಅರ್ಜಿ ಸಲ್ಲಿಸಿತ್ತು. ಅನಧಿಕೃತವಾಗಿ ಸಂಪರ್ಕ ಕಲ್ಪಿಸಿದ್ದ ದೇಗಾಂವ ಗ್ರಾಮದಲ್ಲಿ ಕಾಮಗಾರಿ ನಡೆಸಲು ಮತ್ತೆ ಅರ್ಜಿ ಸಲ್ಲಿಸಿತ್ತು.