ಇಟಾನಗರ : ಚಕ್ಮಾ ನಿರಾಶ್ರಿತರಿಗೆ ಪೌರತ್ವ ನೀಡುವುದನ್ನು ವಿರೋಧಿಸಿ ಅರುಣಾಚಲ ಪ್ರದೇಶ ವಿದ್ಯಾರ್ಥಿ ಸಂಘಟನೆ (ಆಪ್ಸಾ) ಮಂಗಳವಾರ ಬಂದ್ಗೆ ಕರೆ ನೀಡಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಯಿತು.
ನಾಮ್ಸಿ, ಚಂಗಲಾಂಗ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಯು ಹಿಂಸೆಗೆ ತಿರುಗಿತು. ಪ್ರತಿಭಟನಾಕಾರರು ಬಸ್ಗಳಿಗೆ ಹಾನಿ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸಿಂಗ್ ಕಾಲ್ಸಿ ಹೇಳಿದ್ದಾರೆ.
ಬಂದ್ನಿಂದಾಗಿ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು. ಬೆಳಿಗ್ಗೆ ಮುಚ್ಚಿದ್ದ ಮಾರುಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳು ಸಂಜೆ ತೆರೆದವು.