ಸೇನೆಯ ರೂಪುರೇಷೆಗಳ ಬಗ್ಗೆ ಬುಧವಾರ (ಸೆ.20) ಕಲಬುರ್ಗಿಯಲ್ಲಿ ನಡೆಯಲಿರುವ ಲಿಂಗಾಯತ ರ್ಯಾಲಿಯ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಗುವುದು. ಸಚಿವರಾದ ಎಂ.ಬಿ.ಪಾಟೀಲ, ಡಾ.ಶರಣ ಪ್ರಕಾಶ ಪಾಟೀಲ, ವಿನಯ ಕುಲಕರ್ಣಿ, ಶಾಸಕ ಬಿ.ಆರ್. ಪಾಟೀಲ, ಕೂಡಲಸಂಗಮ ಪಂಚಮಸಾಲಿ ಮಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶ್ರೀಶೈಲ ಜಗದ್ಗುರು ಸಾರಂಗಧರ ಸ್ವಾಮೀಜಿ, ಭಾಲ್ಕಿ ಬಸವಲಿಂಗ ಪಟ್ಟದ್ದೇವರು ಪಾಲ್ಗೊಳ್ಳಲಿದ್ದಾರೆ. ಮಹಾರಾಷ್ಟ್ರದ ಅಹಮದ್ಪುರದಲ್ಲಿರುವ ಶತಾಯುಷಿ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಲಬುರ್ಗಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.