ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಡನೂರು ರಸ್ತೆ: ಗುಂಡಿಗಳದ್ದೇ ಕಾರುಬಾರು ದೂರು

Last Updated 20 ಸೆಪ್ಟೆಂಬರ್ 2017, 9:32 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಕಾಡನೂರು ರಸ್ತೆಯಲ್ಲಿ ರಾತ್ರಿ ಇರಲಿ ಹಗಲಿನ ವೇಳೆಯಲ್ಲಿಯೇ ನಡೆದಾಡಲು ಆಗದಷ್ಟು ಗುಂಡಿಗಳು ಬಿದ್ದಿವೆ’ ಎಂದು ಕಾಡನೂರು ಗ್ರಾಮದ ನಿವಾಸಿ ಲೊಕೇಶ್‌ಬಾಬು ದೂರಿದ್ದಾರೆ.

ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಗ್ರಾಮದ ರಸ್ತೆ ಡಾಂಬರು ಕಂಡು ಹತ್ತು ವರ್ಷಗಳು ಕಳೆದಿವೆ. ಅವರು ಈ ಬಗ್ಗೆ ಮಾಹಿತಿ ನೀಡಿ, ‘ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಂತಿರುವುದು ಕಾಣಿಸದೆ ಬೈಕ್‌ ಸವಾರರು ಬಿದ್ದು ಪ್ರತಿದಿನ ಅಪಘಾತಗಳು ಸಾಮಾನ್ಯವಾಗಿವೆ’ ಎಂದಿದ್ದಾರೆ.

ಈ ಬಗ್ಗೆ ಹಲವಾರು ಬಾರಿ ಕ್ಷೇತ್ರದ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕನಿಷ್ಠ ರಸ್ತೆ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳನ್ನಾದರು ಮುಚ್ಚುವ ಮೂಲಕ ಪ್ರತಿದಿನ ನಡೆಯುವ ಅಪಘಾತಗಳನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT