ದೊಡ್ಡಬಳ್ಳಾಪುರ: ‘ಕಾಡನೂರು ರಸ್ತೆಯಲ್ಲಿ ರಾತ್ರಿ ಇರಲಿ ಹಗಲಿನ ವೇಳೆಯಲ್ಲಿಯೇ ನಡೆದಾಡಲು ಆಗದಷ್ಟು ಗುಂಡಿಗಳು ಬಿದ್ದಿವೆ’ ಎಂದು ಕಾಡನೂರು ಗ್ರಾಮದ ನಿವಾಸಿ ಲೊಕೇಶ್ಬಾಬು ದೂರಿದ್ದಾರೆ.
ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಗ್ರಾಮದ ರಸ್ತೆ ಡಾಂಬರು ಕಂಡು ಹತ್ತು ವರ್ಷಗಳು ಕಳೆದಿವೆ. ಅವರು ಈ ಬಗ್ಗೆ ಮಾಹಿತಿ ನೀಡಿ, ‘ಮಳೆ ಬಂದಾಗ ಗುಂಡಿಗಳಲ್ಲಿ ನೀರು ನಿಂತಿರುವುದು ಕಾಣಿಸದೆ ಬೈಕ್ ಸವಾರರು ಬಿದ್ದು ಪ್ರತಿದಿನ ಅಪಘಾತಗಳು ಸಾಮಾನ್ಯವಾಗಿವೆ’ ಎಂದಿದ್ದಾರೆ.
ಈ ಬಗ್ಗೆ ಹಲವಾರು ಬಾರಿ ಕ್ಷೇತ್ರದ ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕನಿಷ್ಠ ರಸ್ತೆ ಮಧ್ಯದಲ್ಲಿ ಬಿದ್ದಿರುವ ಗುಂಡಿಗಳನ್ನಾದರು ಮುಚ್ಚುವ ಮೂಲಕ ಪ್ರತಿದಿನ ನಡೆಯುವ ಅಪಘಾತಗಳನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.