ಪ್ರಾದೇಶಿಕ ಸಂಪರ್ಕ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ನಾಲ್ಕು ವಿಮಾನನಿಲ್ದಾಣಗಳನ್ನು ಮೊದಲನೆಯ ಸುತ್ತಿನ ಬಿಡ್ಡಿಂಗ್ನಲ್ಲಿ ಆಯ್ಕೆ ಮಾಡಲಾಗಿದೆ. ಮೈಸೂರು, ಬೀದರ್, ವಿದ್ಯಾನಗರ(ಬಳ್ಳಾರಿ) ಮತ್ತು ಬೆಂಗಳೂರು ಅಂತರಾಷ್ಟ್ರೀಯ ವಿಮಾನನಿಲ್ದಾಣ ಇವುಗಳಲ್ಲಿ ಸೇರಿವೆ. ಈ ಎಲ್ಲ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಮತ್ತು ಅಲ್ಲಿ ಕಾರ್ಯಚಟುವಟಿಕೆಗಳು ಆದಷ್ಟು ಬೇಗ ಪ್ರಾರಂಭಿಸಲು ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದಿದ್ದಾರೆ.