ಮದ್ದೂರು (ಮಂಡ್ಯ ಜಿಲ್ಲೆ): ಸಮೀಪದ ವಳಗೆರೆಹಳ್ಳಿ ಗ್ರಾಮದಲ್ಲಿ ದಲಿತರ ಕ್ಷೌರ ನಿರಾಕರಣೆ ಹಿನ್ನೆಲೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್ ದಲಿತರ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮದ ದಲಿತ ಮುಖಂಡ ಭಾನುಪ್ರಕಾಶ್ ನಿವಾಸಕ್ಕೆ ಭೇಟಿ ನೀಡಿ, ತಾಯಿ ನಿರ್ಮಲಾ ಹಾಗೂ ತಂದೆ ಸಾಕಯ್ಯ ಅವರನ್ನು ಪ್ರಶ್ನಿಸಿದಾಗ, ‘ನಮಗೆ ಸವರ್ಣೀಯರಿಂದ ಜೀವ ಬೆದರಿಕೆ ಇದೆ’ ಎಂದು ತಿಳಿಸಿದರು.